ಮಧುರಚೆನ್ನ

From Wikipedia

ಮಧುರಚೆನ್ನರೆಂದು ಖ್ಯಾತಿಪಡೆದ ಕವಿ ಹಲಸಂಗಿ ಚೆನ್ನಮಲ್ಲಪ್ಪನವರು.ಇವರ ಪೂರ್ಣ ಹೆಸರು ಚೆನ್ನಮಲ್ಲಪ್ಪ ಸಿದ್ಧಲಿಂಗಪ್ಪ ಗಲಗಲಿ. ಇವರು ಜನಿಸಿದ್ದು ಹಲಸಂಗಿಯಿಂದ ಪಶ್ಚಿಮಕ್ಕೆ ೬ ಮೈಲು ದೂರದಲ್ಲಿರುವ ಲೋಣಿ ಎನ್ನುವ ಊರಿನಲ್ಲಿ.ಜನನ ದಿನಾಂಕ ೧೯೦೩ ಜುಲೈ ೩೧.ಮಧುರಚೆನ್ನರ ವಿದ್ಯಾಭ್ಯಾಸ ಮುಲಕಿ ಪರೀಕ್ಷೆಗೆ ಮುಕ್ತಾಯವಾಯಿತು.ಆಬಳಿಕ ಬಿಜಾಪುರಕ್ಕೆ ಹೋಗಿ ಅಲ್ಲಿ ಶ್ರೀ ಕೊಣ್ಣೂರು ಹಣಮಂತರಾಯರಿಂದ ಸಾಧ್ಯವಾದಷ್ಟು ಇಂಗ್ಲಿಷ್,ಸಂಸ್ಕೃತ ಹಾಗು ಹಳಗನ್ನಡಗಳನ್ನು ಕಲಿತರು. ಮಧುರಚನ್ನರ ವಿವಾಹ ಅವರ ೧೬ನೆಯ ವರ್ಷಕ್ಕೆ ಬಸಮ್ಮ ಎನ್ನುವ ೧೨ ವರ್ಷದ ಕನ್ಯೆಯ ಜೊತೆಗೆ ಆಯಿತು.ಅವರಿಗೆ ೬ ಹುಡುಗರು ಹಾಗು ಇಬ್ಬ್ಬರು ಹುಡುಗಿಯರು. ಮಧುರಚೆನ್ನರು ತಮ್ಮ ೧೪ನೆಯ ವಯಸ್ಸಿನಲ್ಲಿಯೆ ಸಾಹಿತ್ಯಸೃಷ್ಟಿಗೆ ತೊಡಗಿದರು. ೧೯ನೆಯ ವಯಸ್ಸಿಗೆ ಶಿಲಾಶಾಸನಗಳ ಹಾಗು ಜನಪದ ಸಾಹಿತ್ಯ ಸಂಶೋಧನೆಯಲ್ಲಿ ತೊಡಗಿದರು.ಹಲಸಂಗಿಯಲ್ಲಿ ಗೆಳೆಯರ ಬಳಗವನ್ನು ಕಟ್ಟಿದರು. ಅನೇಕ ಸಾಮಾಜಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ಆದರೆ ಬಾಲ್ಯದಿಂದಲೂ ಅವರದು ಆಧ್ಯಾತ್ಮಿಕತೆಯ ಕಡೆಗೆ ಒಲೆದ ಮನಸ್ಸು;ಕೆಲಕಾಲ ನಾಸ್ತಿಕರಾಗಿದ್ದರೂ ಸಹ, ಕೊನೆಗೊಮ್ಮೆ ಶ್ರೀ ಅರವಿಂದರನ್ನು ತನ್ನ ಗುರುಗಳೆಂದು ಭಾವಿಸಿದರು. ತೀವ್ರ ಆಧ್ಯಾತ್ಮಸಾಧನೆಯ ನಂತರ ಮಧುರಚೆನ್ನರು ೧೯೫೩ ಅಗಸ್ಟ ೧೫ರಂದು ದೇಹವಿಟ್ಟರು.

ಮಧುರಚೆನ್ನರ ಸಾಹಿತ್ಯ:

  • ನನ್ನ ನಲ್ಲ (ಕವನಸಂಗ್ರಹ)
  • ಪೂರ್ವರಂಗ (ಆಧ್ಯಾತ್ಮಿಕ ಆತ್ಮಕಥನ)
  • ಕಾಳರಾತ್ರಿ (--"--)
  • ಬೆಳಗು (--"--)
  • ಆತ್ಮಸಂಶೋಧನೆ (ಸ್ವಾನುಭವ ಕಥನ)
  • ಪೂರ್ಣಯೋಗದ ಪಥದಲ್ಲಿ (ಅರವಿಂದರ ಯೋಗ ವಿಚಾರಗಳು)
  • ಕನ್ನಡಿಗರ ಕುಲಗುರು (ವಿದ್ಯಾರಣ್ಯರ ಜೀವನದ ಬಗೆಗೆ ಸಿಂಪಿ ಲಿಂಗಣ್ಣನವರ ಜೊತೆಯಲ್ಲಿ ರಚನೆ)

ಅನುವಾದ:

  • ವಿಸರ್ಜನ (ರವೀಂದ್ರನಾಥ ಠಾಕೂರರ ಬಂಗಾಲಿ ನಾಟಕದಿಂದ)
  • ಪೂರ್ಣಯೋಗ (ಶ್ರೀ ಅರವಿಂದರ 'ಯೋಗಿಕ ಸಾಧನ'ದಿಂದ)
  • ಮಾತೃವಾಣಿ (ಶ್ರೀ ಮಾತೆಯವರ 'ವರ್ಡ್ಸ ಆಫ್ ದ ಮದರ್'ದಿಂದ)
  • ಬಾಳಿನಲ್ಲಿ ಬೆಳಕು (ಟಾಲ್ ಸ್ಟಾಯ್ ರ ಆತ್ಮಕಥನ: ಸಿಂಪಿ ಲಿಂಗಣ್ಣನವರ ಜೊತೆಯಲ್ಲಿ)
  • ಧರ್ಮಕ್ಷೇತ್ರೆ ಕುರುಕ್ಷೇತ್ರೆ (ಸಿಂಪಿ ಲಿಂಗಣ್ಣನವರ ಜೊತೆಯಲ್ಲಿ)