ಗಿರೀಶ್ ಕಾರ್ನಾಡ್
From Wikipedia
(ಜನನ- ೧೯ ಮೇ, ೧೯೩೮) ಕನ್ನಡಕ್ಕೆ ಏಳನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಗಿರೀಶ್ ಕಾರ್ನಾಡ್ ಕನ್ನಡ ಸಾಹಿತ್ಯದಲ್ಲಿ ನಾಟಕ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಈ ಪ್ರಶಸ್ತಿ ಬಂದಾಗ ಹಲವರು ಹುಬ್ಬೇರಿಸಿದರು. ಪ್ರಶಸ್ತಿಯ ಹಿಂದೆ ಕನ್ನಡ ಲಾಬಿಯಿದೆ ಎಂದೂ ಕೆಲವರು ಗೊಣಗಿದರು. ಆದರೆ ಕಾರ್ನಾಡರು ಇದಕ್ಕೆ ಅರ್ಹರಾದರೂ ಪ್ರಶಸ್ತಿ ಬೇಗ ಹುಡುಕಿ ಬಂದದ್ದು ಟೀಕೆಗೆ ಕಾರಣವಾಯಿತು. ಭಾರತದಲ್ಲೇ ನಾಟಕ ಸಾಹಿತ್ಯ ರಚನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದವರಲ್ಲಿ ಕಾರ್ನಾಡ್ ಮೊದಲಿಗರು.
ಹೀಗಾಗಿ ಕಾರ್ನಾಡ್ ಪ್ರಶಸ್ತಿ ಬಂದಾಗ ಸೌಜನ್ಯದಿಂದಲೇ ಮರಾಠಿಯ ವಿಜಯ ತೆಂಡೂಲ್ಕರ್ ಅವರಂಥವರಿಗೆ ಈ ಪ್ರಶಸ್ತಿ ಬರಬೇಕಿತ್ತು ಎಂದು ಹೇಳಿ ದೊಡ್ಡತನ ಮೆರೆದಿದ್ದರು. ಕನ್ನಡದಲ್ಲಿ ನಾಟಕ ರಚಿಸುತ್ತ, ಇತರ ಭಾರತೀಯ ಭಾಷೆಗಳಲ್ಲಿ ಸಂಪರ್ಕವಿಟ್ಟುಕೊಂಡು ಸಾಂಸ್ಕೃತಿಕ ವಕ್ತಾರರಾದ ಕಾರ್ನಾಡ್ ನಟರಾಗಿ, ನಿರ್ದೇಶಕರಾಗಿ ಹೆಸರಾಗಿದ್ದಾರೆ. ಆರಂಭದಲ್ಲಿ ರಂಗಭೂಮಿ ನಟರಾಗಿದ್ದವರು ಹೊಸ ವಿಚಾರಗಳತ್ತ ಗಮನ ಹರಿಸಿ ನಾಟಕ ರಚನೆಗೆ ಚಿಂತಿಸಿದರು. ಹೀಗಾಗಿ ಪುರಾಣ, ಇತಿಹಾಸಗಳು ವಾಸ್ತವ ನೆಲೆಗಟ್ಟಿನಲ್ಲಿ ನೇಯಲ್ಪಟ್ಟವು.
ಪರಿವಿಡಿ |
[ಬದಲಾಯಿಸಿ] ಜೀವನ
ಗಿರೀಶ ಕಾರ್ನಾಡ್ರು ೧೯೩೮ ಮೇ. ೧೯ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಹುಟ್ಟಿದ್ದರು. ತಂದೆ ಡಾ| ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾಬಾಯಿ. ಪ್ರಗತಿಶೀಲ ಮನೋಭಾವದ ಡಾ| ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡುಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಬೆಳವಣಿಗೆಯಲ್ಲಿ ಸಹಾಯವಾಯಿತು. ಬಾಲ್ಯ ಶಿಕ್ಷಣ ಶಿರಸಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲ್, ಪದವಿ ಶಿಕ್ಷಣ ಕರ್ನಾಟಕ ಕಾಲೇಜು, ಎಂ.ಎ. ವ್ಯಾಸಂಗ ಮುಂಬಯಿಯಲ್ಲಾಯಿತು. ಮುಂದೆ ಸ್ಕಾಲರ್ಷಿಪ್ ಮೇರೆಗೆ ಆಕ್ಸ್ಫರ್ಡ್ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್ಫರ್ಡ್ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಶಿಯನ್ ಆಗಿದ್ದಾರೆ.
ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು. ಬಹುಶಃ ಕನ್ನಡದ ಒಬ್ಬ ನಾಟಕಕಾರ ಇಷ್ಟೊಂದು ಭಾಷೆಗೆ ಪರಿಚಯವಾದದ್ದು ಪ್ರಥಮ.
ಆಕ್ಸ್ಫರ್ಡ್ನಿಂದ ಬಂದ ನಂತರ ಮದ್ರಾಸ್ನಲ್ಲಿ ನೌಕರಿಯಲ್ಲಿದ್ದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.
[ಬದಲಾಯಿಸಿ] ವೃತ್ತಿ ಜೀವನ
[ಬದಲಾಯಿಸಿ] ಚಿತ್ರರಂಗ
ಮುಂದೆ ಸಿನಿಮಾ ಆಸಕ್ತಿಯಿಂದಾಗಿ ಎಸ್.ಎಲ್. ಭೈರಪ್ಪನವರ ವಂಶವೃಕ್ಷ ಕಾದಂಬರಿಯನ್ನು ಆಧರಿಸಿ, ಬಿ. ವಿ. ಕಾರಂತರ ಜೊತೆಗೂಡಿ ವಂಶವೃಕ್ಷ ಚಿತ್ರವನ್ನು ನಿರ್ದೇಶನ ಮಾಡಿದರು. ಇದು ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಪುರಸ್ಕಾರ ಪಡೆಯಿತು. ಈ ಮುನ್ನ ಪ್ರಯೋಗಾತ್ಮಕ ಚಿತ್ರ "ಸಂಸ್ಕಾರ"ದಲ್ಲಿ ಪ್ರಮುಖಪಾತ್ರ ನಿರ್ವಹಿಸಿದ್ದರು. ಈ ಚಿತ್ರದ ನಿರ್ದೇಶಕರು ಪಟ್ಟಾಭಿರಾಮರೆಡ್ಡಿ ಅವರು. ಇದು ಕನ್ನಡಕ್ಕೆ ಪ್ರಥಮ ಸ್ವರ್ಣಕಮಲ ತಂದು ಕೊಟ್ಟ ಚಿತ್ನ. ಮುಂದೆ "ಚೆಲುವಿ", "ತಬ್ಬಲಿಯು ನೀನಾದೆ ಮಗನೆ", "ಕಾಡು", "ಒಂದಾನೊಂದು ಕಾಲದಲ್ಲಿ" ಚಿತ್ರಗಳನ್ನು ನಿರ್ದೇಶಿಸಿದರು. "ಕಾಡು" ಹಲವಾರು ಪ್ರಶಸ್ತಿ ಪುರಸ್ಕಾರ ಪಡೆಯಿತು. ನಂತರ "ಉತ್ಸವ್", "ಗೋಧೂಳಿ" ಎಂಬ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕಾನೂರು ಸುಬ್ಬಮ್ಮ ಹೆಗ್ಗಡಿತಿ ಕಾದಂಬರಿಯನ್ನು ಆಧರಿಸಿ "ಕಾನೂರು ಹೆಗ್ಗಡಿತಿ" ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ರಾಜ್ಯ ಪ್ರಶಸ್ತಿ, ರಾಷ್ಟ್ರೀಯ ಪುರಸ್ಕಾರ ಪಡೆದು, ಪನೋರಮಕ್ಕೂ ಆಯ್ಕೆಯಾಯಿತು.
[ಬದಲಾಯಿಸಿ] ನಾಟಕಗಳು
ಅಂಜುಮಲ್ಲಿಗೆ, ತುಘಲಕ್, ಯಯಾತಿ, ಹಯವದನ, ಹಿಟ್ಟಿನಹುಂಜ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಟಿಪ್ಪುವಿನ ಕನಸುಗಳು ಇವರ ಪ್ರಮುಖ ನಾಟಕ ಕೃತಿಗಳು. ಗಿರೀಶ್ರು ೭೦ರ ದಶಕದ ನವ್ಯದ ಸಂದರ್ಭದಲ್ಲಿ ಬರೆಯತೊಡಗಿದ ನಾಟಕಗಳ ವಸ್ತು ಅಮೂರ್ತಕ್ಕೆ ಸಂಬಂಧಿಸಿದ್ದಾಗಿತ್ತು. ಪಾಶ್ಚಾತ್ಯ ಸಾಹಿತ್ಯದಲ್ಲಾದ ಬದಲಾವಣೆಯ ಗಾಳಿ ಕನ್ನಡಕ್ಕೂ ಹಬ್ಬಿತ್ತು. ಇಲ್ಲಿ ಕಾವ್ಯ, ಕತೆ, ಕಾದಂಬರಿಗಳಲ್ಲಿ ಪಾಶ್ಚಾತ್ಯ ಪ್ರಭಾವದ ಛಾಯೆ ಎದ್ದು ಕಾಣುತ್ತಿತ್ತು. ವಸ್ತುವಿನ ಆಯ್ಕೆಯಲ್ಲಿ ಭಿನ್ನತೆ ಕಂಡರೂ, ಈ ನೆಲದ ಅಭಿವ್ಯಕ್ತಿಗೆ ದೂರವಾದ ಬರಹಗಳು ಜನಕ್ಕೆ ಹತ್ತಿರವಾಗಲಿಲ್ಲವೆಂಬ ದೂರು ಕೇಳಿಬಂತು. ಹೀಗಾಗಿ ಸ್ವಚ್ಛಂದದ ಬದುಕಿಗೆ ತೆರೆದುಕೊಂಡ "ಅಂಜುಮಲ್ಲಿಗೆ" ಬೇರೆಯಾಗೇ ಉಳಿಯಿತು. ಮುಂದೆ ಕಾರ್ನಾಡರು ಈ ವಸ್ತುವನ್ನು ದೂರವಿಟ್ಟಂತೆ ಕಾಣಲು "ತುಘಲಕ್", "ಯಯಾತಿ" ಬರೆದಾಗ ಇತಿಹಾಸ, ಪುರಾಣದ ಛಾಯೆ ಎದ್ದು ಕಾಣಿಸಿತು.
ಕರ್ನಾಟಕ ವಿಶ್ವವಿದ್ಯಾಲಯ ಕಾರ್ನಾಡರ ಸಾಹಿತ್ಯ-ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. "ಕಾರ್ನಾಡರು ವಸ್ತುವನ್ನು ಗ್ರಹಿಸುವ ಕ್ರಮದಲ್ಲೇ ಅವರ ಅನನ್ಯತೆ ಇದೆ. ಈ ಗ್ರಹಿಕೆಗೆ ಪೂರಕವಾದ ರಚನಾಕ್ರಮವನ್ನು ಅವರು ಕಂಡುಕೊಂಡಿದ್ದಾರೆ. ಒಂದು ಸಮಸ್ಯೆಯನ್ನು ನಾಟಕ ರೂಪಕ್ಕೆ ಒಗ್ಗಿಸಿಕೊಂಡು ಅದಕ್ಕೊಂದು structure ಕೊಟ್ಟು ಜನರ ಮುಂದಿಡುವುದರಲ್ಲೇ ನಾಟಕಕಾರನ ಯಶಸ್ಸು, ಸೋಲು ಎರಡೂ ಅಡಗಿದೆ." ಎಂದು ಕಾರ್ನಾಡರ ನಾಟಕಗಳ ವಸ್ತು, ಗ್ರಹಿಕೆ ಬಗ್ಗೆ ಭಾರತೀಯ ರಂಗಭೂಮಿಯ ಹಿರಿಯ ನಿರ್ದೇಶಕ ಬಿ. ವಿ. ಕಾರಂತರು ದಾಖಲಿಸುತ್ತಾರೆ.
[ಬದಲಾಯಿಸಿ] ಪ್ರಶಸ್ತಿಗಳು
ಕಾರ್ನಾಡರಿಗೆ ಹಲವಾರು ಹುದ್ದೆಗಳು, ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿಗಳ ಗೌರವ ದೊರೆಕಿದೆ. ಕಾರ್ನಾಡ್ ಕೇಂದ್ರ ಸಂಗೀತ-ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇಂಗ್ಲೆಂಡ್ನಲ್ಲಿ ನೆಹರು ಸೆಂಟರ್ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು
ಕನ್ನಡ
ಕುವೆಂಪು | ದ.ರಾ.ಬೇಂದ್ರೆ | ವಿನಾಯಕ ಕೃಷ್ಣ ಗೋಕಾಕ | ಶಿವರಾಮ ಕಾರಂತ | ಮಾಸ್ತಿ ವೆಂಕಟೇಶ ಅಯ್ಯಂಗಾರ್ | ಯು.ಆರ್.ಅನಂತಮೂರ್ತಿ | ಗಿರೀಶ್ ಕಾರ್ನಾಡ್
ಹಿಂದಿ
ಮಹಾದೇವಿ ವರ್ಮ | ನಿರ್ಮಲಾ ವರ್ಮ | ಸುಮಿತ್ರಾ ನಂದನ್ ಪಂತ್ | ರಾಮ್ಧಾರಿ ಸಿಂಘ್ ದಿನಕರ್ | ಅಜ್ಞೇಯ | ನರೇಶ್ ಮೆಹ್ತಾ | ನಿರ್ಮಲ್ ವರ್ಮಾ
ಬೆಂಗಾಲಿ
ಮಹಾಶ್ವೇತಾದೇವಿ
ಗುಜರಾತಿ
ರಾಜೇಂದ್ರ ಕೇಶವ್ಲಾಲ್ ಷಾ
ಮರಾಠಿ
ವಿಂದಾ ಕರಂದೀಕರ್ | ಕುಸುಮಾಗ್ರಜ್
ತೆಲುಗು
ವಿಶ್ವನಾಥ ಸತ್ಯನಾರಾಯಣ
ಮಳಯಾಳಂ
ಎಂ.ಟಿ.ವಾಸುದೇವನ್ ನಾಯರ್ | ಜಿ. ಶಂಕರ ಕುರುಪ್
ಕನ್ನಡ ಚಲನಚಿತ್ರ ನಿರ್ದೇಶಕರು
ವೈ.ವಿ.ರಾವ್ | ಎಂ.ಆರ್.ವಿಠಲ್ | ಹೆಚ್.ಎಲ್.ಎನ್ ಸಿಂಹ | ಡಿ.ಶಂಕರ್ ಸಿಂಗ್ | ಬಿ.ಆರ್.ಪಂತುಲು | ಕಣಗಾಲ್ ಪ್ರಭಾಕರ ಶಾಸ್ತ್ರಿ | ಜಿ.ವಿ.ಅಯ್ಯರ್ | ಆರ್.ನಾಗೇಂದ್ರರಾಯ | ಬಿ.ಎಸ್.ರಂಗಾ | ಆರ್.ಎನ್.ಜಯಗೋಪಾಲ್ | ಗೀತಪ್ರಿಯ | ಹುಣಸೂರು ಕೃಷ್ಣಮೂರ್ತಿ | ಆರೂರು ಪಟ್ಟಾಭಿ | ಸಿದ್ಧಲಿಂಗಯ್ಯ | ಪುಟ್ಟಣ್ಣ ಕಣಗಾಲ್ | ಗಿರೀಶ್ ಕಾರ್ನಾಡ್ | ಎಂ.ಎಸ್.ರಾಜಶೇಖರ್ | ಬಿ ವಿ ಕಾರಂತ | ಪ್ರೇಮಾ ಕಾರಂತ | ಗಿರೀಶ್ ಕಾಸರವಳ್ಳಿ | ನಾಗತಿಹಳ್ಳಿ ಚಂದ್ರಶೇಖರ್ | ನಾಗಾಭರಣ | ಟಿ. ಪಟ್ಟಾಭಿರಾಮ ರೆಡ್ಡಿ | ಸುರೇಶ್ ಹೆಬ್ಳಿಕರ್ | ಭಾರ್ಗವ | ರಾಜೇಂದ್ರಸಿಂಗ್ ಬಾಬು | ಡಿ.ರಾಜೇಂದ್ರ ಬಾಬು | ದೊರೈ-ಭಗವಾನ್ | ಎನ್. ಲಕ್ಷ್ಮಿ ನಾರಾಯಣ್ | ಕೆ.ಎಸ್.ಎಲ್.ಸ್ವಾಮಿ(ರವೀ) | ತಿಪಟೂರು ರಘು | ಕೆ.ಬಾಲಚಂದರ್ | ಮಣಿರತ್ನಂ | ಶಂಕರ್ ನಾಗ್ | ಸಿಂಗೀತಂ ಶ್ರೀನಿವಾಸ ರಾವ್ | ಜೋಸೈಮನ್ | ರಮೇಶ್ ಭಟ್ | ರವಿಚಂದ್ರನ್ | ಕಾಶೀನಾಥ್ | ಫಣಿ ರಾಮಚಂದ್ರ | ಪಿ.ಹೆಚ್.ವಿಶ್ವನಾಥ್ | ಎಸ್.ನಾರಾಯಣ್ | ಓಂಪ್ರಕಾಶ್ ರಾವ್ | ಉಪೇಂದ್ರ | ಸುನೀಲ್ ಕುಮಾರ್ ದೇಸಾಯಿ | ಪ್ರೇಂ | ಮಹೇಂದರ್ | ಓಂ ಸಾಯಿಪ್ರಕಾಶ್ | ವಿ.ಮನೋಹರ್ | ಸುದೀಪ್ | ರಮೇಶ್ | ಮಾ.ಕಿಶನ್ | ಕವಿತಾ ಲಂಕೇಶ್| ಪಿ ಲಂಕೇಶ್ | ಇಂದ್ರಜಿತ್ ಲಂಕೇಶ್ | ರವಿ ಶ್ರೀವತ್ಸ | ಜಯಂತಿ | ಆರತಿ | ಲಕ್ಷ್ಮಿ | ಲೋಕೇಶ್