ಗಳಗನಾಥ
From Wikipedia
ಗಳಗನಾಥ ಕಾವ್ಯನಾಮದ ವೆಂಕಟೇಶ ತಿರಕೊ ಕುಲಕರ್ಣಿಯವರು ಹುಟ್ಟಿದ್ದು ೧೮೬೯ ಜನೆವರಿಯಲ್ಲಿ, ಹಾವೇರಿ ತಾಲೂಕಿನ ಗಳಗನಾಥ ಎನ್ನುವ ಹಳ್ಳಿಯಲ್ಲಿ. ಮುಲ್ಕಿ ಪರೀಕ್ಷೆ ಹಾಗು ಶಿಕ್ಷಕರ ಟ್ರೇನಿಂಗ ಪರಿಕ್ಷೆ ಪಾಸು ಮಾಡಿದ ಬಳಿಕ ಇವರು ಶಿಕ್ಷಕರಾಗಿ ಕೆಲಸ ಮಾಡಿದರು. ೧೯೦೬ ರ ಸುಮಾರಿಗೆ ಗುತ್ತಲದಲ್ಲಿ ಕೆಲಸ ಮಾಡುತ್ತಿದ್ದಾಗ, ಸಮೀಪದ ಅಗಡಿಯಲ್ಲಿದ್ದ ಆನಂದವನದ ಶ್ರೀ ಶೇಷಾಚಲ ಸದ್ಗುರುಗಳಿಂದ ಪ್ರಭಾವಿತರಾದರು.ಅಲ್ಲಿಂದಲೇ ೧೯೦೮ನೆಯ ಇಸವಿಯಲ್ಲಿ “ ಸದ್ಬೋಧ ಚಂದ್ರಿಕೆ” ಎನ್ನುವ ಮಾಸಪತ್ರಿಕೆಯ ಪ್ರಾರಂಭಕ್ಕೆ ಕಾರಣರಾದರು ಹಾಗು ೧೯೧೮ ರವರೆಗೆ ಅದರ ಮುಖ್ಯ ಲೇಖಕರಾಗಿದ್ದರು.
ಕ್ರಿ.ಶ.೧೮೯೭ನೆಯ ಇಸವಿಯಲ್ಲಿ ಗಳಗನಾಥರು ಬರೆದ “ ಪದ್ಮನಯನೆ” ಎಂಬ ಕಾದಂಬರಿಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದವರು ಏರ್ಪಡಿಸಿದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಸಿಕ್ಕಿತ್ತು. ಗಳಗನಾಥರು ಐದು ಸ್ವತಂತ್ರ ಕಾದಂಬರಿಗಳನ್ನು ಹಾಗು ೧೫-೧೬ ಅನುವಾದಿತ ಕಾದಂಬರಿಗಳನ್ನು ರಚಿಸಿದ್ದಾರೆ. ೧೯೪೪ ರಲ್ಲಿ ಗಳಗನಾಥರು ನಿಧನರಾದರು.
ಗಳಗನಾಥರನ್ನು ಕನ್ನಡ ಕಾದಂಬರಿಗಳ ಪಿತಾಮಹ ಎಂದು ಕರೆಯಲಾಗುತ್ತದೆ.