ಶ್ರೀರಂಗಪಟ್ಟಣ

From Wikipedia

ಶ್ರೀರಂಗಪಟ್ಟಣ, ಕರ್ನಾಟಕದ ಮೈಸೂರು ಜಿಲ್ಲೆಯ ಒಂದು ಪ್ರಮುಖ ಐತಿಹಾಸಿಕ, ಸಾಂಸ್ಕೃತಿಕ ಹಾಗು ಧಾರ್ಮಿಕ ಮಹತ್ವ ಹೊಂದಿರುವ ಪಟ್ಟಣವಾಗಿದೆ.

ಪರಿವಿಡಿ

[ಬದಲಾಯಿಸಿ] ಸ್ಥಳ

ಶ್ರೀರಂಗಪಟ್ಟಣದಲ್ಲಿ ಹರಿಯುತ್ತಿರುವ ಕಾವೇರಿ ನದಿ

ಮೈಸೂರು ನಗರದಿಂದ ೧೩ ಕಿ.ಮೀ. ದೂರದಲ್ಲಿರುವ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆಯ ಗಡಿಯಲ್ಲಿದೆ. ಪಟ್ಟಣವು ಸುತ್ತಲೂ ಕಾವೇರಿ ನದಿಯಿಂದ ಆವೃತವಾಗಿದೆ. ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಯು ಪೂರ್ವವಾಹಿನಿ ಹಾಗು ಪಶ್ಚಿಮವಾಹಿನಿಗಳಾಗಿ ಕವಲೊಡೆದು ಹರಿಯುತ್ತದೆ. ಇದರಿಂದಾಗಿ ಶ್ರೀರಂಗಪಟ್ಟನವು ಒಂದು ದ್ವೀಪದಂದಿತೆ.

[ಬದಲಾಯಿಸಿ] ಧಾರ್ಮಿಕ ಮಹತ್ವ

ಶ್ರೀ ರಂಗನಾಥ ಸ್ವಾಮಿ ದೇವಾಲಯ
Enlarge
ಶ್ರೀ ರಂಗನಾಥ ಸ್ವಾಮಿ ದೇವಾಲಯ

ಶ್ರೀರಂಗನಾಥ ಸ್ವಾಮಿ ದೇವಾಲಯವು ಪಟ್ಟಣದ ಪ್ರಮುಖ ಆಕರ್ಷಣೆಗಳಲ್ಲಿ ಒಂದು. ಈ ದೇವಾಲಯವು ಗಂಗ ಅರಸರು ಕಾಲದ್ದೆಂದು ಪ್ರತೀತಿಯಿದೆ. ಇದನ್ನು ೧೨ ನೇ ಶತಮಾನದಲ್ಲಿ ಜೀರ್ಣೋದ್ಧಾರ ಮಾಡಲಾಯಿತು.

ಕಾವೇರಿ ನದಿ ಕವಲೊಡೆಯುವ ಸ್ಥಳಗಳಲ್ಲೆಲ್ಲ ಶ್ರೀರಂಗನಾಥ ಸ್ವಾಮಿಯ ದೇವಾಲಯಗಳಿರುವುದು ಒಂದು ವಿಶೇಷ. ಇವುಗಳೆಂದರೆ:

  • ಆದಿ ರಂಗ - ಶ್ರೀರಂಗಪಟ್ಟಣ
  • ಮಧ್ಯ ರಂಗ - ಶಿವನಸಮುದ್ರ
  • ಅಂತ್ಯ ರಂಗ - ತಮಿಳುನಾಡಿನ ಶ್ರೀರಂಗಂ

ಪಶ್ಚಿಮ ವಾಹಿನಿಯು ಹಿಂದುಗಳಿಗೆ ಅಂತಿಮ ಕರ್ಮಗಳನ್ನು ಮಾಡಲು ಒಂದು ಪುಣ್ಯ ಕ್ಷೇತ್ರ. ಇಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಮೃತರ ಅಸ್ಥಿಗಳನ್ನು ವಿಸರ್ಜಿಸಿದರೆ ಮೋಕ್ಷ ಲಭಿಸುವುದೆಂದು ನಂಬಿಕೆಯಿದೆ.

[ಬದಲಾಯಿಸಿ] ಐತಿಹಾಸಿಕ ಮಹತ್ವ

ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಶ್ರೀರಂಗಪಟ್ಟಣ ಐತಿಹಾಸಿಕ ಮಹತ್ವವುಳ್ಳ ಊರಾಗಿದೆ. ಟಿಪ್ಪು ಸುಲ್ತಾನ ಹಾಗು ಹೈದರಾಲಿ ಯವರ ಕಾಲದಲ್ಲಿ ಶ್ರೀರಂಗಪಟ್ಟಣ ಮೈಸೂರು ಸಾಮ್ರಾಜ್ಯದ ರಾಜಧಾನಿಯಾಗಿತ್ತು.

[ಬದಲಾಯಿಸಿ] ಶ್ರೀರಂಗಪಟ್ಟಣದಲ್ಲಿ ನೋಡುವ ಸ್ಥಳಗಳು

  • ಶ್ರೀರಂಗನಾಥ ಸ್ವಾಮಿ ದೇವಾಲಯ
  • ಜುಮ್ಮ ಮಸೀದಿ
  • ದರಿಯಾ ದೌಲತ್
  • ರಂಗನತಿಟ್ಟು ಪಕ್ಷಿಧಾಮ
  • ಶ್ರೀ ನಿಮಿಷಾಂಬ ದೇವಾಲಯ
  • ಕರಿಘಟ್ಟದಲ್ಲಿರುವ ಶ್ರೀ ವೆಂಕಟೇಶ್ವರ ದೇವಾಲಯ

[ಬದಲಾಯಿಸಿ] ಉಲ್ಲೇಖನಗಳು

ಇತರ ಭಾಷೆಗಳು