ಎ.ಎನ್.ಮೂರ್ತಿರಾವ್
From Wikipedia
ಎ.ಎನ್.ಮೂರ್ತಿ ರಾವ್ (ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾಯರು) (ಜೂನ್. ೧೬ ೧೯೦೦ - ೨೪ ಆಗಸ್ಟ್ ೨೦೦೫)- ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಬರಿಯ ಶತಾಯುಷಿಯಷ್ಟೇ ಅಲ್ಲದೇ, ಮೂರು ಶತಮಾನಗಳಲ್ಲಿ ( ೧೯,೨೦,೨೧ನೆಯ ಶತಮಾನಗಳು) ಬದುಕಿದ ಅತ್ಯಂತ ಅಪರೂಪದ ವ್ಯಕ್ತಿ.
ಇವರ "ಚಿತ್ರಗಳು ಪತ್ರಗಳು" ಎಂಬ ಕೃತಿಗೆ ೧೯೭೯ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.
ಪ್ರಬಂಧಗಳ ಮೂಲಕ ಇವರು ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೧೯೩೭ರಲ್ಲಿ ಇವರ ಮೊದಲ ಕೃತಿ "ಹೂವುಗಳು"(ಪ್ರಬಂಧ ಸಂಕಲನ) ಪ್ರಕಟವಾಯಿತು. ಎಂಟು ಪ್ರಬಂಧಗಳ ಈ ಸಂಕಲನವು ಇಂದಿಗೂ ಒಂದು ಮಾದರಿ ಕೃತಿಯಾಗಿದೆ. ವೈಚಾರಿಕ ನಾಸ್ತಿಕವಾದಿಯಾದ ರಾಯರ "ದೇವರು" ಎಂಬ ಕೃತಿಯು ಆಂಗ್ಲ ಭಾಷೆಗೆ ತರ್ಜುಮೆಯಾಗಿ ವಿಶ್ವಪ್ರಸಿಧ್ಧವಾಗಿದೆ.
ಪರಿವಿಡಿ |
[ಬದಲಾಯಿಸಿ] ಕನ್ನಡ ಕೃತಿಗಳು
[ಬದಲಾಯಿಸಿ] ಅನುವಾದಗಳು
- ಸಾಕ್ರೆಟೀಸನ ಕೊನೆಯ ದಿನಗಳು ( ಪ್ಲೇಟೋನ 'Enthyphro','Crito',Apology',Phaedo' - ಸಂವಾದಗಳ ಅನುವಾದ)
- ಹವಳದ ದ್ವೀಪ ( ಆರ.ಎಂ.ಬ್ಯಾಲಂಟಯಿನ್ ನ 'The Coral Island' ನ ಸಂಗ್ರಹಾನುವಾದ)
- ಯೋಧನ ಪುನರಾಗಮನ ( ಅನುವಾದಿತ ಕಥೆಗಳು)
- ಪಾಶ್ಚಾತ್ಯ ಸಣ್ಣ ಕಥೆಗಳು ( ಅನುವಾದಿತ ಕಥೆಗಳು)
- ಅಮೆರಿಕನ್ ಸಾಹಿತ್ಯ ಚರಿತ್ರೆ
- ಇಂಡಿಯ, ಇಂದು ಮತ್ತು ನಾಳೆ ( ಜವಹರಲಾಲ್ ನೆಹರೂರ 'India Today and Tomorrow' ಪುಸ್ತಕದ ಅನುವಾದ)
- ಚಂಡಮಾರುತ (ಷೇಕ್ ಸ್ಪಿಯರ್ ನ 'The Tempest' ಅನುವಾದ)
[ಬದಲಾಯಿಸಿ] ಲಲಿತ ಪ್ರಬಂಧಗಳು
- ಹಗಲುಗನಸುಗಳು
- ಮಿನುಗು ಮಿಂಚು
- ಅಲೆಯುವ ಮನ
- ಜನತಾ ಜನಾರ್ದನ
- ಸಮಗ್ರ ಲಲಿತ ಪ್ರಬಂಧಗಳು
- ಸಮಗ್ರ ಲಲಿತ ಪ್ರಬಂಧಗಳು (ವಿಸ್ತ್ರತ ಆವೃತ್ತಿ)
[ಬದಲಾಯಿಸಿ] ರೂಪಾಂತರಗಳು
- ಆಷಾಢಭೂತಿ ( ಮೋಲಿಯರನ 'ತಾರ್ತುಫ್' ನಾಟಕದ ರೂಪಾಂತರ)
[ಬದಲಾಯಿಸಿ] ವಿಮರ್ಶೆ
- ಷೇಕ್ ಸ್ಪಿಯರ್ - ಪೂರ್ವಭಾಗ
- ಮಾಸ್ತಿಯವರ ಕಥೆಗಳು
- ಪೂರ್ವ ಸೂರಿಗಳೊಡನೆ
- ಸಾಹಿತ್ಯ ಮತ್ತು ಸತ್ಯ
- ವಿಮರ್ಶಾತ್ಮಕ ಪ್ರಬಂಧಗಳು,
[ಬದಲಾಯಿಸಿ] ಇತರ
- ಚಿತ್ರಗಳು ಪತ್ರಗಳು
- ಬಿ.ಎಂ.ಶ್ರೀಕಂಠಯ್ಯ (ವಿಮರ್ಶಾತ್ಮಕ ಜೀವನ ಚರಿತ್ರೆ)
- ಅಪರವಯಸ್ಕನ ಅಮೆರಿಕಾ ಯಾತ್ರೆ (ಪ್ರವಾಸ ಕಥನ)
- ಸಂಜೆಗಣ್ಣಿನ ಹಿನ್ನೋಟ ( ಆತ್ಮಚರಿತ್ರೆ)
- ದೇವರು ( ವಿಚಾರ)
- ಜನತಾ ಜನಾರ್ದನ ( ಲೇಖನಗಳು)
- ಗಾನ ವಿಹಾರ ( ಲೇಖನಗಳು)
- ಮಹಾಭಾರತದಲ್ಲಿ ಕೇಡು ಎಂಬುದರ ಸಮಸ್ಯೆ
[ಬದಲಾಯಿಸಿ] ಪುರಸ್ಕಾರಗಳು
೧೯೭೪ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
೧೯೭೭ ಮೈಸೂರು ವಿಶ್ವವಿದ್ಯಾನಿಲಯದ ಗೌರವ ಡಿ.ಲಿಟ್.
೧೯೭೮ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಅಪರವಯಸ್ಕನ ಅಮೆರಿಕಾ ಯಾತ್ರೆ)
೧೯೭೯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ( ಚಿತ್ರಗಳು ಪತ್ರಗಳು)
೧೯೮೧ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಚಂಡಮಾರುತ)
೧೯೮೪ ಅಧ್ಯಕ್ಷ ಪದ- ಕೈವಾರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
೧೯೮೪ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
೧೯೯೪ ಪಂಪ ಪ್ರಶಸ್ತಿ
೧೯೯೯ ಮಾಸ್ತಿ ಪ್ರಶಸ್ತಿ
೧೯೯೯ ಭಾರತೀಯ ವಿದ್ಯಾ ಭವನದ ಫೆಲೋಶಿಪ್